ಶನಿವಾರ, ಸೆಪ್ಟೆಂಬರ್ 8, 2012

ಮಳೆ ಬರಲೇ ಇಲ್ಲ

ನಡುದಾರಿಯಲಿ ಗುಂಡಿ ತೋಡಿ
ಮಳೆಗೆ ಗೊಳೆಯಾಗುವ ನೀರು ನನದೆಂದು
ಕಾದು ಕೂತಿರುವೆ
ಟ್ರಕ್ಕು, ಲಾರಿ, ದೆವ್ವದ ಮೋಟಾರುಗಳ ತಂದು
ನುಣ್ಣನೆ ಸಿಮೆಂಟಿನ ರೋಡು ಹಾಸಿದರು

ಮಳೆ ಬರಲೇ ಇಲ್ಲ

ಹಸಿದ ಹೊಟ್ಟೆಯ ಒಳಗೆ ಬರದು ಶಂಖನಾದ
ತುಂಬಿದ ಹೊಟ್ಟೆಯಲಿ ತಿಂಗಳುಗಟ್ಟಲೆ
ಕಷ್ಟ ನೋವುಗಳ ತರಬೇತಿ ಪಡೆದವರು
ಮಾತ್ರ ಊದಬಹುದು ಕದನಕಹಳೆ

ಮದುವೆಯಾಗದಿರುವುದು ಸರಿಯಾದ ನಿರ್ಧಾರ
ನಾವೆಲ್ಲಾ ನಿರ್ಧಾರ ಮಾಡಲಾಗದವರು
ಕಹಿಯುಪ್ಪು, ಹುಳಿದಾರ ಹೃದಯ ಬಾಣಲೆಯಲಿ ಕುದಿದು
ಪುಪ್ಪುಸಕ್ಕೆ ಬರೀ ಬೆವರಿನ ವಾಸನೆ

ನೆಲದ ನಂಟು ಸಾಕೆಂದು ಸಮುದ್ರಕ್ಕೆ ಧುಮುಕಿದರೆ
ನೀರೆಲ್ಲ ಜೀವಗಾಳಿಯಾಗಿ ಮುಟ್ಟಿದ್ದು ಮತ್ತೊಂದು ನೆಲ
ಕಾವೆಲ್ಲ ಖಾಲಿಯಾಗಿ ಎದೆಯ ನೀಲಿಯಲ್ಲಿ
ಚಂದ್ರನಿಗೆ ಹಸಿವಾಗಿ ನಕ್ಷತ್ರಗಳೆಲ್ಲ ಮಾಯ.

1 ಕಾಮೆಂಟ್‌:

Badarinath Palavalli ಹೇಳಿದರು...

ಈ ಪರಿಯ ವಿಷಾದವೇತಕೆ ಗೆಳೆಯ?

ಬರವೋ ನೆರೆಯೋ ಅದು ಅಲ್ಲಾಹುವಿನ ದಯೆ!